ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಭಾರಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದೆ.
ಪೂಂಚ್ ಮತ್ತು ರಾಜೌರಿ ಜಿಲ್ಲೆಗಳಲ್ಲಿ ಹಲವು ಮನೆಗಳು ಕೊಚ್ಚಿಹೋಗಿದ್ದು, ಭೀಕರ ಅವಘಡಗಳಿಗೆ ಇದುವರೆಗೆ 11ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಹವಾಮಾನ ವೈಪರೀತ್ಯ ಹಾಗೂ ರಸ್ತೆಗಳು ಜಖಂಗೊಂಡಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಧಾರಾಕಾರ ಮಳೆಗೆ ಜಮ್ಮು-ಕಾಶ್ಮೀರದ ನದಿಗಳು ಉಕ್ಕಿ ಹರಿಯುತ್ತಿರುವುದು. Source: The Hindu


