ಕರ್ನಾಟಕ ಬಂದ್ಗೆ ಕರೆ ನೀಡಿದ್ದರೂ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಯಾವುದೇ ರಜೆ ಘೋಷಿಸಲಾಗಿಲ್ಲ. ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಪೋಷಕರ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿಲ್ಲ. ಬಹುತೇಕ ಜಿಲ್ಲೆಗಳಲ್ಲಿ ಅಂಗಡಿ-ಮುಂಗಟ್ಟುಗಳು ಮತ್ತು ಮಾರುಕಟ್ಟೆಗಳು ಸಹ ತೆರೆದಿದ್ದು, ಬಂದ್ಗೆ ನೈತಿಕ ಬೆಂಬಲ ಮಾತ್ರ ವ್ಯಕ್ತವಾಗಿದೆ.


