ಬಸ್ ಕಂಡಕ್ಟರ್ ಮೇಲೆ ಪೋಕ್ಸೋ ಪ್ರಕರಣ ಖಂಡಿಸಿ ಮಾರೀಹಾಳ ಪೊಲೀಸರ್ ವಿರುದ್ಧ ಕರವೇ ಪ್ರತಿಭಟನೆ...!

ಬೆಳಗಾವಿ: ಬಸ್ ನಿರ್ವಾಹಕನ ಮೇಲೆ ಹಲ್ಲೆ ಹಾಗೂ ಪೋಕ್ಸೋ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಜಿಲ್ಲಾ ಘಟಕದ ವತಿಯಿಂದ ಶನಿವಾರ ಬೆಳಗಾವಿ ತಾಲೂಕಿನ ಮಾರೀಹಾಳ ಪೊಲೀಸ್ ಠಾಣೆ ಎದುರಿಗೆ ಪ್ರತಿಭಟನೆ ನಡೆಸಿದರು.
ಮಾರೀಹಾಳ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಬಂದ ಕರವೇ ಕಾರ್ಯಕರ್ತರರು ಬಸ್ ಕಂಡಕ್ಟರ್ ಮೇಲೆ ದಾಖಲಾಗಿರುವ ಪೋಕ್ಸೋ ಪ್ರಕರಣ ಹಿಂಪಡೆಯಬೇಕೆಂದು ಕರವೇ ಕಾರ್ಯಕರ್ತರರು ಧರಣಿ ನಡೆಸಿದರು. ಈ ವೇಳೆ ಅಧಿಕಾರಿಗಳ ಹಾಗೂ ಕರವೇ ಕಾರ್ಯಕರ್ತರಿಗೆ ನಡುವೆ ಮಾತಿನ ವಾಗ್ವಾದ ನಡೆಯಿತು.
ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿರುವಾಗಲೇ ಶುಕ್ರವಾರ ತಡರಾತ್ರಿ ವೇಳೆಗೆ ಮಾರೀಹಾಳ ಪೊಲೀಸ್ ಠಾಣೆಯಲ್ಲಿ ಬಸ್ ಕಂಡಕ್ಟರ್ ವಿರುದ್ಧ ಪೋಕ್ಸೋ ಪ್ರಕರಣವನ್ನು ದಾಖಲೆ ಮಾಡಿರುವ ಪೊಲೀಸರ ವಿರುದ್ಧ ಧಿಕ್ಕಾರ ಕೂಗುತ್ತಾ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.
ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ್ ಗುಡಗನಟ್ಟಿ ಅವರು ಮಾತನಾಡಿ ಈ ಪ್ರಕರಣದ ದಿಕ್ಕನ್ನು ಬದಲಿಸುವ ನಿಟ್ಟಿನಲ್ಲಿ ಕಂಡಕ್ಟರ್ ಮೇಲೆ ಸುಳ್ಳು ಪೋಕ್ಸೋ ಪ್ರಕರಣವನ್ನು ದಾಖಲು ಮಾಡಿರುತ್ತಾರೆ ಎಂದರು.
ತಕ್ಷಣ ಪೊಲೀಸರು ಪೋಕ್ಸೋ ಪ್ರಕರಣವನ್ನು ಹಿಂಪಡೆಯಬೇಕು ಇಲ್ಲವಾದರೆ ಕರವೇ ಉಗ್ರ ಹೋರಾಟಕ್ಕೆ ಕರೆ ನೀಡಲಿದೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಪ್ರತಿಭಟನೆ ಮಾಡುತ್ತಿರುವ ಕರವೇ ಕಾರ್ಯಕರ್ತರನ್ನು ಪೊಲೀಸರು ಅವಶ್ಯಕ ಪಡೆದರು ಕೆಲವು ಸಮಯದ ನಂತರ ಬಿಡುಗಡೆಗೊಳಿಸಿದರು.
